Thursday, May 15, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Featured

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನ ಜನರಿಗೆ ತಲುಪಿಸುವಲ್ಲಿ ಶಾಸಕ ರಾಮದಾಸ್ ರಾಜ್ಯಕ್ಕೆ ಮಾದರಿ : ಅರುಣ್ ಸಿಂಗ್

News Desk by News Desk
December 29, 2021
in Featured
0
0
SHARES
0
VIEWS
Share on FacebookShare on Twitter

READ ALSO

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

ಕಳೆದ ಸೆಪ್ಟೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 71 ನೆಯ ಜನ್ಮದಿನದ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ಕೃಷ್ಣರಾಜ ಕ್ಷೇತ್ರದಲ್ಲಿ 20 ದಿನಗಳ ಮೋದಿ ಯುಗ್ ಉತ್ಸವ ಎನ್ನುವ ಕಾರ್ಯಕ್ರಮ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನ ಕಾರ್ಯಕ್ಕೆ ಚಾಲನೆ ನೀಡಿದ್ದರು, ಇದಲ್ಲದೇ ಸುಮಾರು 13 ಕ್ಕೂ ಅಧಿಕ ಕೇಂದ್ರ, ರಾಜ್ಯದ ಸಚಿವರುಗಳು ಆಗಮಿಸಿ ಸೂರ್ಯ ಪಥ್, ಸಂಗೀತ ಮನೆಗೆ ಸರ್ಕಾರಿ ಶಾಲೆಯ ಮಕ್ಕಳು, ನಗರ ಅಂಚಿನ ಗ್ರಾಮಗಳ ಅಭಿವೃದ್ಧಿ ಕಾರ್ಯ, ಸಮಗ್ರ ಆರೋಗ್ಯ, ಹೀಗೆ ಹತ್ತಾರು ಹಲವಾರು  ಯೋಜನೆಗಳ ಅನುಷ್ಠಾನ ಕಾರ್ಯಕ್ಕೆ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿ 20 ದಿನಗಳ ಕಾರ್ಯಕ್ರಮದ ಒಂದು ಪುಸ್ತಕವನ್ನು ಸಹ ಬಿಡುಗಡೆ ಮಾಡಿ ಮಾನ್ಯ ರಾಮದಾಸ್ ಅವರ ಈ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ರಾಜ್ಯಾದ್ಯಂತ ಈ ಕಾರ್ಯಗಳನ್ನು ವಿಸ್ತರಿಸುವುದಾಗಿಯೂ ಹೇಳಿದ್ದರು.
ಮೋದಿ ಯುಗ್ ಉತ್ಸವದ ಪುಸ್ತಕವನ್ನು ಮಾನ್ಯ ಶಾಸಕರು ದೆಹಲಿಗೆ ತೆರಳಿ ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಕರ್ನಾಟಕ ಭಾಜಪಾ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವಾರು ಪಕ್ಷದ ಮುಖಂಡರು ಹಾಗೂ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನೀಡಿದ್ದರು.
ಕಳೆದ 2 ದಿನಗಳಿಂದ ಬಿಜೆಪಿ ರಾಜ್ಯ ಕಾರ್ಯಕಾರಣಿಯು ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದು  ನಿನ್ನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನ ಕಾರ್ಯಗಳ ಬಗ್ಗೆ ಶಾಸಕರನ್ನು, ಸಚಿವರನ್ನು ಕುರಿತು ಮಾತನಾಡುವಾಗ *ನಾನು ನೋಡಿದ್ದೇನೆ ಇಲ್ಲಿ ಮೈಸೂರಿನ ಶಾಸಕರಾದ ರಾಮದಾಸ್ ಜಿ ಕುಳಿತಿದ್ದಾರೆ ಅವರ ಕ್ಷೇತ್ರದಲ್ಲಿ ಕ್ಯಾOಪ್ ಗಳನ್ನು ಮಾಡಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಆರ್.ಅಶೋಕ್, ಡಾ.ಸುಧಾಕರ್ ಎಲ್ಲರೂ ಅಲ್ಲಿಗೆ ಹೋಗಿ ನೋಡಿದ್ದಾರೆ ಒಂದೊಂದೂ ಯೋಜನೆಗಳ ಅನುಷ್ಠಾನದ ಬಗ್ಗೆ ಒಂದು ಪುಸ್ತಕವನ್ನೂ ಸಹ ಅವರು ಮಾಡಿದ್ದಾರೆ ಅವರಿಗೆ ಎಲ್ಲರೂ ಸೇರಿ ಚಪ್ಪಾಳೆ ಬಡಿಯಿರಿ,  ಅವರು ಶಾಸಕರಾಗಿ ಆದಿವಾಸಿಗಳಿಗೆ, ಬಡವರಿಗೆ ಯೋಜನೆಗಳ ಅನುಷ್ಠಾನವನ್ನು ಮಾಡಿದ್ದಾರೆ. ನೀವುಗಳೂ ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಕ್ಯಾOಪ್ ಹಾಕಿಕೊಂಡು ಈ ರೀತಿ ಯೋಜನೆಗಳ ಅನುಷ್ಠಾನ ಮಾಡಿಸಿ ಮನೆ ಮನೆಗೆ ತೆರಳಿ ಇದು ಮೋದಿಜಿ ಸರ್ಕಾರದ ಯೋಜನೆ, ಇದು ಬೊಮ್ಮಾಯಿ ಸರ್ಕಾರದ ಯೋಜನೆ ಎಂದು ತಿಳಿ ಹೇಳುವ ಕೆಲಸ ಮಾಡಬೇಕು* ಎಂದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾನ್ಯ ಶಾಸಕರು ಶ್ರೀಯುತ ಅರುಣ್ ಸಿಂಗ್ ಜಿ ಅವರ ಈ ಪ್ರಶಂಸೆಯ ಮಾತುಗಳು ನನಗೆ ಕೆಲಸ ಮಾಡಲು ಮತ್ತಷ್ಟು ಹುರುಪು ಬಂದಂತಾಗಿದೆ. ಕ್ಷೇತ್ರದಲ್ಲಿ ಈ ಮಟ್ಟಿಗೆ ಯೋಜನೆ ಅನುಷ್ಠಾನ ಆಗುತ್ತಿದೆ ಅಂದರೆ ಅದರ ಹಿಂದೆ ನಮ್ಮ ಕಾರ್ಯಕರ್ತರ ಹಾಗೂ ಅಧಿಕಾರಿಗಳ ಶ್ರಮ ಹೇಳತೀರದು, ಅವರಿಗೆ ಈ ಸಂದರ್ಭದಲ್ಲಿ ಅನಂತ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಂಘಟನೆ ಹಾಗೂ ಸರ್ಕಾರ ಜೊತೆ ಗೂಡಿ ಕ್ಷೇತ್ರದ ಜನತೆಗೆ ಸರ್ಕಾರಿ ಯೋಜನೆಗಳನ್ನು ತಲುಪಿಸುವಲ್ಲಿ  ಕ್ಷೇತ್ರವನ್ನು ನಂ.1 ಮಾಡುವತ್ತ ನಾವು ಹೆಜ್ಜೆ ಇಡುತ್ತಿದ್ದೇವೆ ಎಂದರು.

Arun singh

mysore MLA Ramdas

Related Posts

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
Next Post
ಪ್ರಾರಂಭವಾಗಲಿದೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೋಂದಣಿ .

ಪ್ರಾರಂಭವಾಗಲಿದೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೋಂದಣಿ .

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಕೊಡಗಿನ ಕುವರಿಗೆ ಬರ್ತ್ಡೇ ಸಂಭ್ರಮ …! ನ್ಯಾಷನಲ್ ಕ್ರಶ್ ಅವರ ವಯಸ್ಸೆಷ್ಟು ಗೊತ್ತಾ ..?

ಕೊಡಗಿನ ಕುವರಿಗೆ ಬರ್ತ್ಡೇ ಸಂಭ್ರಮ …! ನ್ಯಾಷನಲ್ ಕ್ರಶ್ ಅವರ ವಯಸ್ಸೆಷ್ಟು ಗೊತ್ತಾ ..?

September 25, 2024
ಲ್ಯಾಪ್‌ಟಾಪ್‌ ಪದೇ ಪದೇ ಹ್ಯಾಂಗ್‌ ಆಗುತ್ತಿದ್ದರೆ ಹೀಗೆ ಮಾಡಿ

ಲ್ಯಾಪ್‌ಟಾಪ್‌ ಪದೇ ಪದೇ ಹ್ಯಾಂಗ್‌ ಆಗುತ್ತಿದ್ದರೆ ಹೀಗೆ ಮಾಡಿ

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024

ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ; ಸಚಿವ ಸುರೇಶ್​ ಕುಮಾರ್ ಸ್ಪಷ್ಟನೆ

March 21, 2025

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.