Thursday, April 24, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ರಾಜ್ಯ

ಮಹತ್ವಾಕಾಂಕ್ಷಿ ರೈತ ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ; ಲೋಕಾರ್ಪಣೆಗೊಳಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

News Desk by News Desk
August 12, 2020
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕೃಷಿಕರು ಮತ್ತು ಕೃಷಿ ಇಲಾಖೆ ನಡುವೆ ಇನ್ನಷ್ಟು ಉತ್ತಮ ಬಾಂಧವ್ಯ ವೃದ್ಧಿಸಲು ರೈತರ ಅನುಕೂಲಕ್ಕಾಗಿ ರಾಜ್ಯ ಇ ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲರ ಮಹತ್ವಾಕಾಂಕ್ಷಿಯ “ರೈತ ಬೆಳೆ ಸಮೀಕ್ಷೆ ಆ್ಯಪ್ ” ಅನ್ನು ಕೃಷಿ ಸಚಿವರಾದ ಬಿ.ಸಿ. ಪಾಟೀಲರು ಆನ್ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ಆ್ಯಪ್ ಮೂಲಕ ಅಂತರ್ಜಾಲದ ಸಹಾಯದಿಂದ ಕೃಷಿಕರು ಲಾಭ ಪಡೆಯಲು ತಮ್ಮಅಂಗೈನಲ್ಲಿಯೇ ಇನ್ನುಮುಂದೆ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸಮೀಕ್ಷೆ ನಡೆಸುವವರ ವಿವರ ಲಭ್ಯವಾಗಲಿದೆ.

READ ALSO

ಮಾರ್ಚ್ 22ರಂದು ‘ಕರ್ನಾಟಕ ಬಂದ್

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

ಹೌದು, ರೈತರ ಅನುಕೂಲಕ್ಕಾಗಿ ಇಲಾಖೆ ಹಾಗೂ ಕೃಷಿ ಸಚಿವರು ಹೊಸಹೊಸ ಯೋಜನೆ ರೈತರಿಗೆ ಲಾಭದಾಯಕವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಲು ಕಾರ್ಯತತ್ಪರರಾಗಿದ್ದು, ಅದರ ಫಲವಾಗಿ ಈ ಆ್ಯಪ್ ಸಿದ್ಧವಾಗಿದೆ.

ಈ ಮೊಬೈಲ್ ಅಪ್ಲೀಕೇಷನ್ ಅನ್ನು ರೈತರು ಆ್ಯಂಡ್ರಾಯ್ಡ್ ಮೊಬೈಲ್ ಸಹಾಯದಿಂದ ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಸುಮಾರು 60 ಎಂಬಿ ಸಾಮರ್ಥ್ಯವುಳ್ಳ ಈ ಆ್ಯಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ನೋಡುವುದಾದರೆ, ರೈತರು ತಮ್ಮ ಆ್ಯಂಡ್ರಾಯ್ಡ್ ಮೊಬೈಲ್ ನಲ್ಲಿ ಪ್ಲೇಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಮೊಬೈಲ್ ನಂಬರ್ ಅನ್ನು ಓಟಿಪಿ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬೇಕು. ನೋಂದಣಿಯಾದ ನಂತರ ತಮ್ಮ ಜಮೀನಿನ ಜಿಲ್ಲೆ, ತಾಲೂಕು, ಗ್ರಾಮ, ಸರ್ವೆ ನಂಬರ್ ಸೇರಿದಂತೆ ಜಮೀನಿನ ವಿವರಗಳುನ್ನು ನಮೂದಿಸಿ ಜಮೀನಿನ ಮಾಹಿತಿ ಹಾಗೂ ತಮ್ಮ ಗ್ರಾಮದ GIS ನಕ್ಷೆಯನ್ನು ಡೌನ್ಲೋಡ್ ಮಾಡಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಹಾಗೂ ಇತರೆ ವಿವರಗಳನ್ನು ಮತ್ತು ಛಾಯಾಚಿತ್ರಗಳನ್ನು ಮೊಬೈಲ್ ಆಪ್ ನಲ್ಲಿಸಂಗ್ರಹಿಸಿ ಅಪ್ಲೋಡ್ ಮಾಡಬೇಕು. ಆಗ ರೈತರ ಸರ್ವೆ ನಂಬರ್ ವಾರು ಜಮೀನಿನ ಬೆಳೆಯ ವಿವರಗಳನ್ನು “ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್”ನಲ್ಲಿ ಸಂಗ್ರಹಣೆ ಮಾಡಿ ವಿವಿಧ ಯೋಜನೆಗಳಿಗೆ ಬಳಸಲಾಗುತ್ತದೆ.

ರೈತರ ಅನುಕೂಲಕ್ಕಾಗಿ ಹಾಗೂ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಈ ಆ್ಯಪ್ ಅನ್ನು ಪರಿಚಯಿಸಲಾಗುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.
ಮಾಹಿತಿಗಾಗಿ:

https://play.google.com/store/apps/details?id=com.csk.KariffTPKfarmer.cropsurvey

ಈ ಲೈವ್ ಆಪ್ ಗೆ ಲಿಂಕ್ ಅನ್ನು ಕ್ಲಿಕ್ಕಿಸಬಹುದಾಗಿದೆ.

Related Posts

ಮಾರ್ಚ್ 22ರಂದು ‘ಕರ್ನಾಟಕ ಬಂದ್
Blog

ಮಾರ್ಚ್ 22ರಂದು ‘ಕರ್ನಾಟಕ ಬಂದ್

March 1, 2025
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
Vijyanagara: ಎಸಿ ಸ್ಫೋಟ : ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ.
ರಾಜ್ಯ

Vijyanagara: ಎಸಿ ಸ್ಫೋಟ : ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ.

September 25, 2024
Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.
ರಾಜ್ಯ

Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.

September 25, 2024
Next Post

ಸ್ವಾತಂತ್ರ್ಯ ದಿನ ಸಂಭ್ರಮದಂದು ಧ್ವಜಾರೋಹಣ: ಸಚಿವರ ಪಟ್ಟಿ ಬಿಡುಗಡೆ

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

Ananth kumar Hegde

ತಪ್ಪಿದ ಮತ್ತೊಂದು ವಿಮಾನ ದುರಂತ; ಸಂಸದ ಅನಂತ್ ಹೆಗಡೆ ಪಾರು

August 16, 2020
ಅಕ್ಷರ ಕಲಿಸಿದವ – ಅಕ್ಕರೆ ಕಾಣದಾದ!

ಅಕ್ಷರ ಕಲಿಸಿದವ – ಅಕ್ಕರೆ ಕಾಣದಾದ!

September 25, 2024

ಸಂಸ್ಕೃತ ಯೂಸ್‌ಲೆಸ್‌ ಅಂದ ಸಂದೀಪ್‌ ಮಹೇಶ್ವರಿ ; ‌ಜಾಲತಾಣಿಗರಲ್ಲಿ ಆಕ್ರೋಶ

August 13, 2020
ಶತಕದ ಗೋಲ್‌ ಬಾರಿಸಿದ ರೊನಾಲ್ಡೋ

ಶತಕದ ಗೋಲ್‌ ಬಾರಿಸಿದ ರೊನಾಲ್ಡೋ

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.