Thursday, April 24, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Featured

ಸಾವು ಯಾರಿಗೆ,ಹೇಗೆ,ಯಾವಾಗ ಬರುತ್ತದೆ ಗೊತ್ತಿಲ್ಲ-ಕೊರೋನಾಗೆ ಹೆದರಿ ಮನೆಯಲ್ಲಿರುವ ಜಾಯಮಾನ ನನ್ನದಲ್ಲ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

News Desk by News Desk
August 14, 2020
in Featured
0
0
SHARES
0
VIEWS
Share on FacebookShare on Twitter

ಹಾಸನ: ಈ ಪಕ್ಷ ಹುಟ್ಟಿರೋದೆ ರೈತರ ಪರವಾಗಿ ಹೋರಾಟ ಮಾಡೋಕೆ,ನನ್ನ ಅರವತ್ತು ವರ್ಷದ ರಾಜಕೀಯ ಜೀವನದಲ್ಲಿ ಹೋರಾಟ ಮಾಡಿಕೊಂಡೆ ಬಂದಿದ್ದೀನಿ,ರಾಜ್ಯದಲ್ಲಿ ಜನ ವಿರೋಧಿ ಕಾನೂ ನುಗಳಿಂದ ಆಗುವ ಪರಿಣಾಮದ ಬಗ್ಗೆ ಚರ್ಚೆ ಮಾಡಬೇಕಿದೆ.ಇಂದು ಆಕಸ್ಮಿಕವಾಗಿ ರಾಜ್ಯಸಭೆಗೆ ಸದಸ್ಯನಾಗಿ ದ್ದೇನೆ.ಎಷ್ಟು ಸಾಧ್ಯವೊ ಅಷ್ಟು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. 

ರಾಜ್ಯ ಸರ್ಕಾರದ ಜನ ವಿರೋಧಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಹಾಸನದಲ್ಲಿ ನಡೆದ ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿದ ಅವರು,ಈ ಕಾನೂನಿನ ಅಪಾಯದ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜನರಿಗೆ ತಿಳಿಸಬೇಕಿದೆ.ಮೈಸೂರು,ಮಂಡ್ಯ,ತುಮಕುರು,ಚಿಕ್ಕಬಳ್ಳಾಪುರ ಕೋಲಾರದಲ್ಲಿ ನಮ್ಮ ಶಾಸಕರಿದ್ದಾರೆ ಅಲ್ಲಿ ಪರಿಣಾಮಕಾರಿ ಹೋರಾಟ ನಡೆಸಬೇಕು.ಜೊತೆಗೆ ರಾಜ್ಯದೆಲ್ಲೆಡೆ ನಮ್ಮ ಮುಖಂಡರುಗಳು ಹೋರಾಟ ನಡೆಸಿ ಜನತೆ ಪರವಾಗಿ ನಿಲ್ಲಬೇಕಾಗಿದೆ.ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕೃತ ವಿರೋಧ ಪಕ್ಷವಲ್ಲ,ಆದರೂ ನಾವು ಹೋರಾಟ ಮಾಡುತ್ತಿದ್ದೇವೆ. ಇದು ದ್ವೇಷದಿಂದ ಮಾಡುತ್ತಿರೋ ಹೋರಾಟ ಅಲ್ಲ.ನಮ್ಮ ರೈತರ ಸಂಕಷ್ಟಕ್ಕೆ ನಾವು ನೆರವಾಗಬೇಕು.ರಾಜ್ಯದ 30 ಜಿಲ್ಲೆಗಳಲ್ಲೂ ಇದರ ವಿರುದ್ಧ ಹೋರಾಟ ಮಾಡುತ್ತೇವೆ,ಜನರಿಗೆ ಆಗಿರುವ ಅನ್ಯಾಯ ತಡೆಗಟ್ಟಲು ಹೋರಾಟ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದರು. 

READ ALSO

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

ನಾನು ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ ,ಈ ಹೋರಾಟ ಹಾಸನದಿಂದ ಪ್ರಾರಂಭ ಮಾಡುತ್ತಿದ್ದೇವೆ.ಕೊರೊ ನಾದಿಂದ ನನಗೇನಾದ್ರು ತೊಂದರೆ ಆಗುತ್ತೆ ಎಂದು ಕೆಲವರು ಹೆದರುತ್ತಾರೆ.ಆದ್ರೆ ನಾನು ಧೃತಿ ಗೆಡೋದಿಲ್ಲ, ಸಾವು ಯಾವಾಗ ಯಾರಿಗೆ ಹೇಗೆ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ.ಹಾಗಾಗಿ ನಾನು ಈ ರಾಜ್ಯ ದಲ್ಲಿ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ,ರಾಜ್ಯ ಸರ್ಕಾರ ತಂದಿರುವ ಜನ ವಿರೋಧಿ ತಿದ್ದುಪಡಿಗಳ ವಿರುದ್ಧ ಹೋರಾಟ ಮಾಡುತ್ತೀನಿ ಎಂದು ಸರ್ಕಾರಕ್ಕೆ ಮಾಜಿ ಪ್ರಧಾನಿ ಅವರು ಸವಾಲು ಹಾಕಿದರು.

ರಾಜ್ಯ ಹಾಗು ಕೇಂದ್ರದ ಕೆಲ‌‌ ಕಾನೂನುಗಳು ರೈತರಿಗೆ ಅನಾನುಕೂಲ ಆಗಿದೆ.ಕಾರ್ಮಿಕ‌ ನೀತಿ ಗೆ ತಿದ್ದುಪಡಿ ಮಾಡಿರೋದು ದೊಡ್ಡ ಮಾರಕ ಆಗಲಿದೆ.ರಾಜ್ಯ ಸಭೆಯಲ್ಲಿ ಈ ಬಗ್ಗೆ ಹೋರಾಟ ಮಾಡುತ್ತೇನೆ.ಜನ ಸಂಘಟನೆ ಮಾಡಿ ರಾಜ್ಯಾದ್ಯಂತ ಹೋರಾಟ ಮಾಡಲು ಕೊರೊನ ಸ್ವಲ್ಪ ಅಡ್ಡಿಯಾಗಿದೆ.ಆದರೂ ರಾಜ್ಯದ 30 ಜಿಲ್ಲೆಗಳಲ್ಲಿ ಹೋರಾಟ ನಡೆಯಲಿದೆ.ಇನ್ನು ಎರಡು ತಿಂಗಳಲ್ಲಿ ಕೊರೊನ ಸ್ವಲ್ಪ ಕಡಿಮೆಯಾಗಬಹುದು ಎಂಬುದು ನನ್ನ ಭಾವನೆ.ಈ‌ ಹೋರಾಟದಿಂದ ನಾವು ಹಿಂದೆ ಸರಿಯೋದಿಲ್ಲ.ಈ ಕಾಯಿದೆಗಳ ವಿರುದ್ಧ ಹಲವು ಸಂಘ ಸಂಸ್ಥೆಗಳು ಸಹ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದೆ.ಅವರ ಜೊತೆ ನಾವೆಲ್ಲಾ ಸೇರಿ ಹೋರಾಟ ಮಾಡುತ್ತೇವೆ ಎಂದು ಅವರು ವಿವರಿಸಿದರು.

ಬೆಂಗಳೂರಿನ‌ ಕೆಜಿ‌ ಹಳ್ಳಿ‌ ಗಲಭೆ ಪ್ರಕರಣದಿಂದ ನನಗೆ ತೀವ್ರ ಕಳವಳ ಉಂಟಾಗಿದೆ.ಇದು ಒಂದು ರಾಜಕೀಯ ಪಕ್ಷದ ಆಂತಕರಿಕ ಭಿನ್ನಾಭಿಪ್ರಾಯ ಹೊರ ಬರುತ್ತಿದೆ.ಅಖಂಡ ಶ್ರೀನಿವಾಸ ಮೂರ್ತಿಯವರೇ ಒಂದು ಹೆಸರು ಹೇಳಿ‌ ಆರೋಪ ಮಾಡಿದ್ದಾರೆ.ಇದೊಂದು ದುರ್ದೈವ, ಬಿಜೆಪಿಯ ನಡವಳಿಕೆ ಈ ದೇಶದಲ್ಲಿ ಜಗಜ್ಜಾಹೀರಾಗಿದೆ. ಕಾಂಗ್ರೆಸ್ ‌ನ ಒಳಗೂ ಆಂತರಿಕ ಕಲಹ ಹೊರ ಬಂದಿದೆ.ಈ ಪ್ರಕೆಣದಲ್ಲಿ ತಪ್ಪಿತಸ್ಥರು ಯಾರೇ ಇರಲಿ ಅಂತವರಿಗೆ ಶಿಕ್ಷೆ ಆಗಲೇಬೇಕಿದೆ.ಈಗಾಗಲೆ 280 ಕ್ಕೂ ಹೆಚ್ಚು ಜನರನ್ನ ಬಂದಿಸಲಾಗಿದೆ

ಕೆಲವರನ್ನ ಊಹಾಪೋಹದ ಮೇಲೆ ಬಂದಿಸಿರಬಹುದು.ಎಲ್ಲರನ್ನೂ ಅಪರಾದಿಗಳು ಎಂದು ಹೇಳಲಾಗಲ್ಲ. ಸುಳ್ಳು ವದಂತಿಗಳಮೇಲೆ ನಿರಪರಾದಿಗಳಿಗೆ ಶಿಕ್ಷೆ ಆಗಬಾರದು ಅದು ಹಿಂದು ಆಗಿರಲಿ ಅಥವಾ ಯಾರೇ ಆಗಿ ರಲಿ ನಿರಪರಾಧಿಗಳಿಗೆ ಕೊಡಬೇಡಿ ಇದು ನನ್ನ ಮನವಿಯಾಗಿದೆ.

ಇದೊಂದು ದೊಡ್ಡ ವಿಚಾರ ಈ ಬಗ್ಗೆ ಸೂಕ್ತ ತನಿಖೆ ಆಗಬೇಕಿತ್ತು,ಇಷ್ಟು ತೀವ್ರತರವಾದ ದಾಳಿ ಇದು.ಮನೆಗೆ ಬೆಂಕಿ ಹಚ್ಚಿದ್ದಾರೆ.ಮನೆ ಲೂಟಿ ಮಾಡಿದ್ದಾರೆ.ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ.ಈ ತರಹದ ಘಟನೆಗೆ‌ ಮ್ಯಾಜಿ ಸ್ಟ್ರೇಟ್ ತನಿಖೆ ಸಾಲದು ಎಂಬುದು ನನ್ನ ಅನಿಸಿಕೆ.ಇದನ್ನ ಹಾಲಿ ಹೈಕೋರ್ಟ್ ನ್ಯಾಯಾಧೀಶರು ಅಥವಾ ಸಿಸಿಬಿಯಿಂದ ತನಿಖೆ ಮಾಡಿದರೆ ಒಳಿತು ಅನ್ನಿಸುತ್ತೆ ಎಂದು ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದರು.

Tags: coronacorona slow downdevegowdafeartwo months

Related Posts

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
Next Post

ಜಮ್ಮುಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ್ದ ನಾಲ್ವರು ಯೋಧರಿಗೆ ಶೌರ್ಯ ಚಕ್ರ ಗೌರವ

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಟಿಕ್‌ಟಾಕ್‌ ಸಿಇಒ ರಾಜಿನಾಮೆ

August 28, 2020
ಸಡಕ್‌ 2 ಗೆ ಐಎಂಡಿಬಿಯಿಂದ ಕಳಪೆ ರೇಟಿಂಗ್‌

ಸಡಕ್‌ 2 ಗೆ ಐಎಂಡಿಬಿಯಿಂದ ಕಳಪೆ ರೇಟಿಂಗ್‌

September 25, 2024

ಬೆಂಗಳೂರಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಏರಿಕೆ

August 14, 2020
Rhea chakaravarty

ಯಾರು ತನಿಖೆ ನಡೆಸಿದರೂ ಸತ್ಯ ಬದಲಾಗದು ಎಂದ ರಿಯಾ ಚಕ್ರವರ್ತಿ

August 19, 2020

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.