Thursday, June 12, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Featured

ಕೋವಿಡ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿಧಾನಗತಿ ಬೇಡ; ಸಚಿವ ಎಸ್ ಟಿ ಎಸ್

News Desk by News Desk
August 16, 2020
in Featured, ರಾಜ್ಯ
0
SOMASHEKAR ST
0
SHARES
0
VIEWS
Share on FacebookShare on Twitter

ಮೈಸೂರು: ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾತನಾಡುತ್ತಾರೆ. ಇಲ್ಲವೇ ಶಾಸಕರು ಮಾತನಾಡುತ್ತಾರೆ. ಆದರೆ, ಅಧಿಕಾರಿಗಳು ಬಹಳ ನಿಧಾನಗತಿ  ಧೋರಣೆ ತಾಳುತ್ತಿದ್ದಾರೆ. ಇಂತಹ ಬೆಳವಣಿಗೆ ಬೇಡ, ನಾನು ಸಹಿಸುವುದಿಲ್ಲ. ಅಧಿಕಾರಿಗಳೇ ಸ್ವಯಂಪ್ರೇರಿತರಾಗಿ ಸಭೆಯಲ್ಲಿ ಆಯಾ ವಿಷಯಕ್ಕೆ ಸಂಬಂಧಪಟ್ಟಂತೆ ಮಾಹಿತಿಯನ್ನು ಕೊಡಬೇಕು. ಎಲ್ಲರೂ ಸೇರಿ ಕೆಲಸ ಮಾಡಿದರೆ ಮಾತ್ರ ಜಿಲ್ಲಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಕೋವಿಡ್ 19 ಕ್ಕೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲೆಯಲ್ಲಿ ತವಗವದುಕೊಳ್ಳಲಾದ ಹಾಗೂ ತೆಗೆದುಕೊಳ್ಳಲಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಇದೆಲ್ಲದರ ಜೊತೆಗೆ ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಿದರೆ ದೂರುಗಳು, ಕಷ್ಟಗಳು ಗಮನಕ್ಕೆ ಬರುತ್ತವೆ. ಆ ಮಾಹಿತಿಗಳನ್ನು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ ತಮ್ಮ ಗಮನಕ್ಕೆ ತಂದರೆ ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.

READ ALSO

ಮಾರ್ಚ್ 22ರಂದು ‘ಕರ್ನಾಟಕ ಬಂದ್

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಕೆಲಸ ಹೆಚ್ಚು ಮಾಡಿದರೆ ದೂರುಗಳು ಹೆಚ್ಚು ಬರುತ್ತವೆ, ಕಡಿಮೆ ಕೆಲಸ, ಕಡಿಮೆ ದೂರು, ಕೆಲಸವೇ ಮಾಡದಿದ್ದರೆ ದೂರೇ ಇಲ್ಲ ಎಂಬ ಮಾತಿದೆ. ಆದರೆ, ನಾವು ಹೆಚ್ಚು ಹೆಚ್ಚು ಕೆಲಸ ಮಾಡೋಣ ಎಂದು ಸಚಿವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸೋಂಕಿತರಿಗೆ ಮಾನಸಿಕ ಬಲ ತುಂಬಿ
ಕೋವಿಡ್ ಸೋಂಕಿತರಿಗೆ ಮಾನಸಿಕ ಬಲ ತುಂಬುವ ಕೆಲಸ ಆಗಬೇಕು. ಆಸ್ಪತ್ರೆಯ ಒಂದು ಆವರಣದಲ್ಲಿ ದಿನಕ್ಕೊಮ್ಮೆ ಎಲ್ಲ ಸೋಂಕಿತರನ್ನು ಕರೆಸಿ ಅವರಿಗೆ ಪಿಪಿಇ ಕಿಟ್ ಧರಿಸಿದ ಯೋಗ ಶಿಕ್ಷಕರಿಂದ ಯೋಗಾಭ್ಯಾಸ ಮಾಡಿಸುವುದು, ತಜ್ಞ ವೈದ್ಯರಿಂದ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ಕೊಡಿಸುವಂತಹ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಸಚಿವ ಸೋಮಶೇಖರ್ ಅವರು ಸೂಚನೆ ನೀಡಿದರು.

ಮುಖ್ಯಮಂತ್ರಿಗಳಿಂದ ಅವಿರತ ಶ್ರಮ
ಮುಖ್ಯಮಂತ್ರಿಗಳು 24×7 ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬೇರೆ ಯಾವುದೇ ಕೆಲಸಗಳತ್ತ ಚಿಂತನೆ ಮಾಡದೆ ಕೋವಿಡ್ ಸಂಕಷ್ಟಗಳಿಂದ ದೂರ ಮಾಡಲು ಪ್ರಯತ್ನಪಡುತ್ತಿದ್ದಾರೆ. ನಾವು ಅದಕ್ಕಾಗಿಯೇ ಮೈಸೂರಿನಲ್ಲಿ ದಸರಾ ಸಹಿತ ಯಾವುದೇ ಕಾರ್ಯಗಳತ್ತ ಒತ್ತು ಕೊಡದೆ ಜನರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ. ಏನೇ ಸಮಸ್ಯೆ ಇದ್ದರೆ ನಾವು ಬಗೆಹರಿಸುತ್ತೇವೆ. ಅಧಿಕಾರಿಗಳು ಸಹ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಚಿವರು ತಿಳಿಸಿದರು. ಇದೇ ಸಂದರ್ಭದಲ್ಲಿ ಪಾಲಿಕೆ ವ್ಯಾಪ್ತಿ, ತಾಲೂಕುವಾರು ಕೋವಿಡ್ ಸ್ಥಿತಿಗತಿಗಳು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸೋಂಕಿತರ ವಿವರ, ಹಾಸಿಗೆ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಮಾಹಿತಿಯನ್ನು ಪಡೆದು ಕೆಲವು ಸಲಹೆ, ಸೂಚನೆಗಳನ್ನು ನೀಡಲಾಯಿತು.

Tags: cmcovidSOMASHEKARSTSಎಸ್ ಟಿ ಎಸ್ಕೋವಿಡ್ಮುಖ್ಯಮಂತ್ರಿಸೋಮಶೇಖರ್

Related Posts

ಮಾರ್ಚ್ 22ರಂದು ‘ಕರ್ನಾಟಕ ಬಂದ್
Blog

ಮಾರ್ಚ್ 22ರಂದು ‘ಕರ್ನಾಟಕ ಬಂದ್

March 1, 2025
ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
Next Post
Sudhakar

ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೊವಿಡ್ ಚಿಕಿತ್ಸೆಗೆ ಲಭ್ಯ : ಸಚಿವ ಸುಧಾಕರ್

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಪ್ರಧಾನಿ ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

ಪ್ರಧಾನಿ ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

September 25, 2024
CM Bommai to Delhi : ರಾಜ್ಯಕ್ಕೆ ಸಚಿವ ಸಂಪುಟ ಬದಲಾವಣೆ: ದೆಹಲಿಯತ್ತ ಸಿಎಂ ಬೊಮ್ಮಾಯಿ..?

CM Bommai to Delhi : ರಾಜ್ಯಕ್ಕೆ ಸಚಿವ ಸಂಪುಟ ಬದಲಾವಣೆ: ದೆಹಲಿಯತ್ತ ಸಿಎಂ ಬೊಮ್ಮಾಯಿ..?

September 25, 2024

ಮಾಜಿ ರಾಷ್ಟ್ರಪತಿ ಪ್ರಣಬ್ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ

August 13, 2020

ಬ್ರೆಜಿಲ್‌ನಲ್ಲಿ ಲಕ್ಷ ದಾಟಿದ ಕೊರೋನಾ ಸೋಂಕಿತರ ಸಾವು

August 11, 2020

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.